ಅಭಿವೃದ್ಧಿಯೇ ಮೂಲ ಮಂತ್ರದಿಂದ ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿ ಸಂಸದ ಪಿ.ಸಿ.ಮೋಹನ್
ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ತಮ್ಮ ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿ ಸಂಸದ ಪಿ.ಸಿ.ಮೋಹನ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ 15 ವರ್ಷದಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಅವರು, ಮತ್ತೊಮ್ಮೆ ಜನನಾಯಕನಾಗಿ ಹೊರಹೊಮ್ಮುವ ವಿಶ್ವಾಸದಲ್ಲಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾ ಬೆಂಗಳೂರು ನಗರ ಅಭಿವೃದ್ಧಿಗೆ ಶ್ರಮಿಸಿದ ಅವರು 15 ವರ್ಷದಲ್ಲಿ ವಿವಿಧ ವರ್ಗದ ಜನರನ್ನ ಭೇಟಿಯಾಗಿ ಅವರ ಕಷ್ಟಕ್ಕೆ ಸ್ಪಂದಿಸುತ್ತಿರುವ ಪಿ.ಸಿ.ಮೋಹನ್, ಮೆಟ್ರೊ ರೈಲು ಮತ್ತು ಸಬ್ ಅರ್ಬನ್ ರೈಲಿನಂತಹ ಯೋಜನೆಗಳು ಹಾಗೂ ರೈಲ್ವೆ ನಿಲ್ದಾಣಗಳು ಮತ್ತು ಹೆದ್ದಾರಿಗಳಲ್ಲಿ ಉತ್ತಮ ಸೌಕರ್ಯಗಳು, ನಗರಕ್ಕೆ ಎಲೆಕ್ಟ್ರಿಕ್ ಬಸ್ಗಳು ಸ್ಕೈವಾಕ್ಗಳು, ಫ್ಲೈ ಓವರ್ಗಳಂತಹ ಯೋಜನೆಗಳಿಂದ ನಗರದ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು, ಬೆಂಗಳೂರನ್ನು ವಿಶ್ವದರ್ಜೆಯ ಸೌಕರ್ಯಗಳನ್ನು ಒದಗಿಸಲು ದಣಿವರಿಯದೆ ಶ್ರಮ ವಹಿಸಿರುವುದರ ಬಗ್ಗೆ ಮಾತನಾಡಿದರು.
ಇನ್ನೂ ಕ್ಷೇತ್ರದಲ್ಲಿ ಮೂರು ಬಾರಿ ಆಯ್ಕೆಯಾಗಿ ಜನರ ಏಳಿಗಾಗಿ ದುಡಿಯುತ್ತಿರುವ ಪಿ.ಸಿ.ಮೋಹನ್ ಜನರ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡು, ಅವರ ಮನೆ ಬಾಗಿಲಿಗೆ ತಲುಪಬೇಕಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.